
|  |
Dispatched within 7 Business Days |
 | FREE Home Delivery (For purchase of Rs 250/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಎಸ್. ದಿವಾಕರ್ ಹುಟ್ಟಿದ್ದು ಬೆಂಗಳೂರು ಜಿಲ್ಲೆಯ ಸೋಮತ್ತನಹಳ್ಳಿಯಲ್ಲಿ. ದೇವನಹಳ್ಳಿಯಲ್ಲಿ ಮತ್ತು ಬೆಂಗಳೂರಿನಲ್ಲಿ ವಿದ್ಯಾಭ್ಯಾಸ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪದವಿ. ವೃತ್ತಿಯಿಂದ ಪತ್ರಕರ್ತರಾಗಿರುವ ಅವರು ಪ್ರೆಸ್ ಇನ್ಫರ್ಮೇಷನ್ ಬ್ಯೂರೊ, ಸಂಯುಕ್ತ ಕರ್ನಾಟಕ, ಮಲ್ಲಿಗೆ, ಸುಧಾ, ಪ್ರಜಾವಾಣಿ, ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಗಳಲ್ಲಿ ವರದಿಗಾರರಾಗಿ, ಸಹಾಯಕ ಸಂಪಾದಕರಾಗಿ, ಸಂಪಾದಕರಾಗಿ, ಸಂಪಾದಕೀಯ ಸಲಹೆಗಾರರಾಗಿ ಕೆಲಸಮಾಡಿದವರು; ೧೯೮೯ರಿಂದ ೨೦೦೫ರವರೆಗೆ ಚೆನ್ನೈಯಲ್ಲಿರುವ ಅಮೆರಿಕನ್ ಕಾನ್ಸುಲೇಟ್ನಲ್ಲಿ ಸಂಪಾದಕರಾಗಿದ್ದವರು. ಸದ್ಯ ಬೆಂಗಳೂರಿನ ವಸಂತ ಪ್ರಕಾಶನ ಸಂಸ್ಥೆಯಲ್ಲಿ ಸಾಹಿತ್ಯ ಸಲಹೆಗಾರರು. ಸಣ್ಣಕತೆ, ಕಾವ್ಯ, ಪ್ರಬಂಧ, ವಿಮರ್ಶೆ, ಭಾಷಾಂತರ, ಅಂಕಣ ಬರಹ, ಹೀಗೆ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಕೃತಿಗಳನ್ನು ರಚಿಸಿರುವ ಅವರು ೨೦೦೨ರಲ್ಲಿ ಅಮೆರಿಕದ ಅಯೋವಾ ವಿಶ್ವವಿದ್ಯಾಲಯ ವರ್ಷವರ್ಷವೂ ಆಯೋಜಿಸುತ್ತಿರುವ ಅಂತರರಾಷ್ಟ್ರೀಯ ಲೇಖಕರ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ದಿವಾಕರ್ ಪಡೆದಿರುವ ಅನೇಕ ಪ್ರಶಸ್ತಿ, ಪುರಸ್ಕಾರಗಳಲ್ಲಿ ಭಾರತ ಸರಕಾರದ ಸಂಸ್ಕೃತಿ ಇಲಾಖೆಯ ಸೀನಿಯರ್ ಫೆಲೋಶಿಪ್, ರೈಟರ್-ಇನ್-ರೆಸಿಡೆನ್ಸ್, ಅಯೋವಾ ವಿಶ್ವವಿದ್ಯಾಲಯ, ಯು.ಎಸ್.ಎ., ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಅಖಿಲ ಭಾರತ ಕಥಾ ಪ್ರಶಸ್ತಿ, ಶಿವರಾಮ ಕಾರಂತ ಪ್ರಶಸ್ತಿ, ಮುದ್ದಣ ಕಾವ್ಯ ಪ್ರಶಸ್ತಿ, ಬಿ.ಎಚ್. ಶ್ರೀಧರ ಸಾಹಿತ್ಯ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, ಕೋಲ್ಕತಾದ ಅಖಿಲ ಭಾರತ ಹಿಂದೀ ಪುರಸ್ಕಾರ್ ಮುಖ್ಯವಾದುವು.
|
|
| |
|
|
|
|