|
|
|

|  |
Dispatched within 7 Business Days |
 | FREE Home Delivery (For purchase of Rs 250/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಪ್ರಕಾಶಕರು |
: |
ಸುಧಾ ಎಂಟರ್ಪ್ರೈಸಸ್, Sudha Enterprises |
ಈಗಿನ ಮುದ್ರಣದ ಸಂಖ್ಯೆ |
: |
2 |
ಮುದ್ರಣದ ವರ್ಷ |
: |
2013 |
ರಕ್ಷಾ ಪುಟ |
: |
ಸಾದಾ |
ಪುಟಗಳು |
: |
170 |
ಪುಸ್ತಕದ ಗಾತ್ರ |
: |
1/8 Demy Size |
ISBN |
: |
9789383053070 |
ಕೋಡ್ |
: |
176810 |
ಹೆಣ್ಣು ಮಕ್ಕಳಿಗೆ ಸ್ವಾತಂತ್ರ್ಯ ಬಂದಿದೆಯೇ? ಹೌದು ಅಥವಾ ಇಲ್ಲಾಂತ ಹೇಳುವುದು ಕೂಡ ಕಷ್ಟ, ಹೆಣ್ಣು ಮಕ್ಕಳಿಗೆ ಹುಟ್ಟುವ ಸ್ವಾತಂತ್ರ್ಯ ಕೂಡ ಇಲ್ಲ. ಹೆಣ್ಣು ಭ್ರೂಣಹತ್ಯೆ ಪಟ್ಟಣಗಳಲ್ಲು ವಿದ್ಯಾವಂತ ಕುಟುಂಬಗಳಲ್ಲೂ ಕೂಡ ನಡೆಯುತ್ತಿದೆ. ಅತಿಯಾದ ಸ್ವಾತಂತ್ರ್ಯದಿಂದ ಹೆಣ್ಣು ದಿಕ್ಕು ತಪ್ಪಿ ನಡೆಯುತ್ತಿದ್ದಾಳೆ ಎನ್ನುವ ಕೂಗು ಕೂಡ ಇದೆ. ಅಂಥವರಲ್ಲಿ ‘ಸುಭಾಷಿಣಿ’ ಕೂಡ ಇದ್ದಾಳೆ.
ಹೆಣ್ಣಿನ ಪ್ರಾಮಾಣಿಕ ಹೋರಾಟದ ಒಂದು ಮಗ್ಗುಲಿನ ಪರಿಚಯ ಮಾಡಿಕೊಟ್ಟಿದ್ದಾಳೆ ಸುಭಾಷಿಣಿ. ಈ ಕಾದಂಬರಿಯನ್ನು ಓದಿದವರಲ್ಲಿ ತಮ್ಮ ಹೆಣ್ಣು ಮಕ್ಕಳಿಗೆ ‘ಸುಭಾಷಿಣಿ’ ಎಂದು ಹೆಸರಿಟ್ಟವರು ಹಲವು ಮಂದಿ. ಅಂಥ ಮಗಳು ಎಲ್ಲರಿಗೂ ಬೇಕು.
|
ಪ್ರಸಿದ್ಧ ಕಾದಂಬರಿಕಾರ್ತಿ ಸಾಯಿಸುತೆ ಕಾವ್ಯನಾಮದ ರತ್ನ ಅವರು ಕೋಲಾರದಲ್ಲಿ ಆಗಸ್ಟ್ 20, 1942ರಲ್ಲಿ ಜನಿಸಿದರು. ತಂದೆ ವೆಂಕಟಪ್ಪನವರು ಮತ್ತು ತಾಯಿ ಲಕ್ಷ್ಮಮ್ಮನವರು. ಅವರ ಪ್ರಾರಂಭಿಕ ಶಿಕ್ಷಣ ಕೋಲಾರದಲ್ಲಿ ನಡೆಯಿತು. ಕಾಲೇಜಿಗೆ ಸೇರಿದರಾದರೂ 17ನೇ ವಯಸ್ಸಿಗೆ ಮದುವೆಯಾಗಿ ಓದಿಗೆ ತಡೆಬಂತು. ಇತ್ತ ಸಂಸಾರದ ಭಾರ ಹೊರಲಾರದ ವಯಸ್ಸು. ಸಾಹಿತ್ಯ ಪ್ರೇಮಿಯಾದ ಪತಿ ಅಶ್ವತ್ಥನಾರಾಯಣ ಅವರು ಸಾಕಷ್ಟು ಪುಸ್ತಕ ಸಂಗ್ರಹಿಸಿದ್ದರು. ಇವನ್ನೆಲ್ಲಾ ಓದುತ್ತಿದ್ದ ಹಾಗೇ ಅವರಲ್ಲಿ ಸಾಹಿತ್ಯದ ಒಲವು ಮೂಡಿತು. ಸ್ವಯಂ ಶ್ರದ್ಧೆಯಿಂದ ಹಿಂದಿ, ಇಂಗ್ಲಿಷ್, ಸಂಸ್ಕೃತ ಭಾಷೆ ಕಲಿತರು. ಕಾರಂತರು, ಭೈರಪ್ಪ, ಅ.ನ.ಕೃ. ತ.ರಾ.ಸು, ಕಾದಂಬರಿಗಳು ಮಾರುಕಟ್ಟೆಗೆ ಬರುತ್ತಿದ್ದಂತೆ ಕೊಂಡು ಓದುವ ಹುಚ್ಚು ಅವರಲ್ಲಿ ಬೆಳೆದಿತ್ತು. ಹೀಗೆಯೇ ಓದುತ್ತಾ ಓದುತ್ತಾ ಬರೆಯಬೇಕೆಂಬ ತುಡಿತವೂ ಮೂಡಿಬಂತು. ಇವುಗಳ ಪ್ರಕಟಣೆಗೆ ಪತಿ ಅಶ್ವತ್ಥನಾರಾಯಣರ ಬೆಂಬಲವೂ ಜೊತೆಗಿತ್ತು.
|
|
| |
|
|
|
|
|
|
|
|
|