|
|
|

| Rs. 75 | 10% |
Rs. 68/- | |
 |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಗಿರೀಶ ಕಾರ್ನಾಡ್ರು ೧೯೩೮ ಮೇ ೧೯ರಂದು ಮಹಾರಾಷ್ಟ್ರದ ಮಾಥೇರಾನದಲ್ಲಿ ಜನಿಸಿದರು. ತಂದೆ ಡಾ|ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿಶೀಲ ಮನೋಭಾವದ ಡಾ. ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು ಕಳೆದು ಕೊ೦ಡರು. ಬಾಲ್ಯದಲ್ಲೇ ಮದುವೆಯಾಗಿ ಪತಿಯನ್ನು ಕಳೆದುಕೊಂಡಿದ್ದ ೫ ವರ್ಷದ ಮಗ ವಸಂತನ ತಾಯಿ ಕೃಷ್ಣಾಬಾಯಿಯನ್ನು, ಸಮಾಜದ ವಿರೋಧದ ನಡುವೆಯೂ ದಿಟ್ಟತನದಿಂದ ಕೈ ಹಿಡಿದರು. ಸಮಾಜ ಏನೆನ್ನುತ್ತದೆ ಅನ್ನುವುದಕ್ಕಿಂತ ಆದರ್ಶ ಹಾಗೂ ಪ್ರಗತಿಪರತೆ ರಘುನಾಥ್ ಕಾರ್ನಾಡರಲ್ಲಿ ಕಂಡು ಬರುತ್ತದೆ. ಮುಂದೆ ಕಾರ್ನಾಡರಿಗೆ ಇಂಥ ಪ್ರಗತಿಪರ ವಾತಾವರಣವೇ ಅವರ ಬೆಳವಣಿಗೆಯಲ್ಲಿ ಸಹಾಯಕವಾಯಿತು. ೧೯೯೪ರಲ್ಲಿ ತಮ್ಮ `ತಲೆದಂಡ` ನಾಟಕಕ್ಕಾಗಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯನ್ನು ಗಳಿಸಿದ ಗಿರೀಶ್ ಕಾರ್ನಾಡ್ ಅವರು ನಾಟಕ ಕ್ಷೇತ್ರದಲ್ಲಿನ ಅಪೂರ್ವ ಸಾಧನೆಗಾಗಿ ರಾಷ್ಟೀಯ, ಅಂತರರಾಷ್ಟ್ರೀಯ ಖ್ಯಾತಿಯನ್ನು ಗಳಿಸಿರುವಂಥವರು. ಅವರ ನಾಟಕಗಳು ಪುರಾಣ, ಇತಿಹಾಸ ಮತ್ತು ಜಾನಪದ ವಸ್ತು ಮತ್ತು ತಂತ್ರಗಳನ್ನು ಆಶ್ರುಸಿದ್ದರೂ, ರಂಗಸಾಧ್ಯತೆಗಳನ್ನು ವಿಸ್ತರಿಸುವ ಅಪರೂಪದ ಸಾಧನೆಗಳಿಗೆ ಅವನ್ನೇ ಬಳಸಿಕೊಂಡಿವೆ. ಹಳೆಯ ಕಥಾವಸ್ತುಗಳನ್ನೇ ಆಯ್ದುಕೊಂಡಿದ್ದರೂ ಸಮಕಾಲೀನ ಸನ್ನಿವೇಶಗಳಿಗೆ ಹಾಗೂ ಸಮಸ್ಯೆಗಳಿಗೆ ಅವುಗಳನ್ನು ಸಂಬಂಧಿಸಿರುವುದು ಅವರ ವೈಶಿಷ್ಟ್ಯವಾಗಿದೆ. ಮೈಸೂರು ವಿಶ್ವವಿದ್ಯಾನಿಲಯದ ಲಲಿತ ಕಲೆಗಳ ಕಾಲೇಜಿನಲ್ಲಿ ನಾಟಕಶಾಸ್ತ್ರ ವಿಭಾಗದಲ್ಲಿ ಪ್ರವಾಚಕರಾಗಿರುವ ಡಾ. ಮೀರಾ ಮೂರ್ತಿ ಈ ಪುಸ್ತಕದ ಲೇಖಕರು.
|
|
| |
|
|
|
|
|
|
|
|
|