|
|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಶ್ರೀ ಪೂರ್ಣಚಂದ್ರ ತೇಜಸ್ವಿಯವರ ಅನೇಕ ಲೇಖನ, ಭಾಷಣ ಸಂದರ್ಶನಗಳನ್ನು ಕ್ರೋಡೀಕರಿಸಿ ‘ಹೊಸ ವಿಚಾರಗಳು’ ಎಂಬ ಶೀರ್ಷಿಕೆಯ ಅಡಿಯಲ್ಲಿ ತರಲಾಗಿದೆ. ಈ ಕೃತಿಯು ಅಗಣಿತ ವಿಚಾರಗಳ ಭಂಡಾರ. ತೇಜಸ್ವಿಯವರು ತಮ್ಮ ಜೀವಿತಾವಧಿಯಲ್ಲಿ ಚಿಂತಿಸಿ ಬರೆದ, ವೇದಿಕೆಗಳಿಂದ ಮಾತನಾಡಿದ ಹಾಗೂ ಸಕ್ರಿಯವಾಗಿ ಭಾಗವಹಿಸಿದ ಅವರ ಸಮಾಜಮುಖಿ ಮಾತು ಕೃತಿಗಳ ಸಮುಚ್ಚಯ. ಇವನ್ನು ಸುಲಭ ಓದಿಗೆ ಅನುಕೂಲವಾಗುವಂತೆ ಹಲವು ಶೀರ್ಷಿಕೆಗಳ ಅಡಿಯಲ್ಲಿ ವಿಂಗಡಿಸಲಾಗಿದೆ. ಯಾವುದೇ ವಿಷಯವನ್ನು ಎಲ್ಲಿಂದ ಆರಿಸಿ ಓದಿದರೂ ಅದೊಂದು ಪರಿಪೂರ್ಣ ಘಟಕವಾಗಿರುತ್ತದೆ. ತೇಜಸ್ವಿಯವರ ಉನ್ನತ ಆಲೋಚನಾ ಮಟ್ಟ ಹಾಗೂ ಅವನ್ನು ತಮ್ಮ ಜನಕ್ಕೆ ಸುಲಭವಾಗಿ ಅರ್ಥವಾಗುವಂತೆ ಹೇಳಿರುವ ಸರಳ ಶೈಲಿ ಈ ಕೃತಿಯನ್ನು ಓದುಗರಿಗೆ ತುಂಬಾ ಆಪ್ತವಾಗಿಸುತ್ತದೆ.
|
ಕೆ.ಪಿ. ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭)- ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರುಗಳಲ್ಲಿ ಪೂರ್ಣಚಂದ್ರ ತೇಜಸ್ವಿಯವರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು. ತೇಜಸ್ವಿ ಆರಂಭದಲ್ಲಿ ಬೇರೊಂದು ಹೆಸರಲ್ಲಿ ಕಾವ್ಯ ರಚನೆ ಮಾಡಿದ್ದರೂ, ನಂತರ ಕಥಾ ಸಾಹಿತ್ಯ, ಕಾದಂಬರಿ, ಲೇಖನಗಳ ಕಡೆ ಹೆಚ್ಚಿನ ಗಮನ ಹರಿಸಿದರು. ೧೯೮೭ರಲ್ಲಿ `ಚಿದಂಬರ ರಹಸ್ಯ` ಕೃತಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯನ್ನು ಪಡೆದಿರುವ ಶ್ರೀ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರು ತಂದೆ-ಮಕ್ಕಳಿಬ್ಬರೂ ಪ್ರಶಸ್ತಿ ಗಳಿಸಿದ ವಿಕ್ರಮವನ್ನು ಸೃಷ್ಟಿಸಿದ ಜೋಡಿಯಲ್ಲಿ ಎರಡನೆಯವರು. ವಿಜ್ಞಾನ ಮತ್ತು ಇತರ ಕೆಲವು ಸಾಹಿತ್ಯೇತರ ಕ್ಷೇತ್ರಗಳಲ್ಲಿಯೂ ತಮ್ಮತನವನ್ನು ಮೆರೆದಿರುವ ವಿಶಿಷ್ಟ ಲೇಖಕರಾಗಿದ್ದಾರೆ. ಕನ್ನಡ ಕಥೆ-ಕಾದಂಬರಿಗಳ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲುಗಳನ್ನೇ ನೆಟ್ಟ ತೇಜಸ್ವಿ ಅವರು ವಿಶಿಷ್ಟ ಪ್ರವಾಸ ಕಥನ, ಬೇಟೆ ಸಾಹಿತ್ಯ ಹಾಗೂ ಅನುವಾದಿತ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಹಾದಿಯನ್ನು ನಿರ್ಮಿಸಿಕೊಂಡು ಹೊರಟವರು, ಯಶಸ್ಸನ್ನು ಮೆರೆದವರು. ತೇಜಸ್ವಿಯವರನ್ನು ಕುರಿತು ಸಂಶೋಧನೆ ನಡೆಸಿ ಪಿಎಚ್.ಡಿ ಪದವಿ ಗಳಿಸಿದ್ದಾರೆ.
|
|
| |
|
|
|
|
|
|
|
|
|