|
|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ನಮ್ಮ ಸಾರ್ವಜನಿಕ ಬದುಕಿನಲ್ಲಿ ಇಂದು ವ್ಯಾಪಕವಾಗಿ ಹಬ್ಬಿರುವ ಕೊಳಚೆ, ನೀತಿಬಾಹಿರ ಮತ್ತು ಸ್ವಾರ್ಥಪರ ಚಟುವಟಿಕೆಗಳನ್ನು ಸ್ವಾತಂತ್ರ್ಯ ಪೂರ್ವದಲ್ಲಿ ಬರೆದಿರುವ ಔದಾರ್ಯದ ಉರುಳಲ್ಲಿ ಬಿತ್ತರಿಸಿದ್ದ ಕಾರಂತರು ಸ್ವಾತಂತ್ರ್ಯ ದೊರೆತ ಬಳಿತ ಬಳಿಕ ಐದು ದಶಕಗಳ ತನಕ ಬದುಕಿದ್ದರೂ, ಜನಜೀವನದಲ್ಲಿ ವ್ಯಾಪಕವಾಗಿ ಹಬ್ಬಿಕೊಳ್ಳುತ್ತಲೇ ಸಾಗಿದ ಅಪಮೌಲ್ಯಗಳಿಂದಾಗಿ ಮತ್ತಷ್ಟು ಕೊರಗುವಂತಾಯಿತು. ಹೊರತು, ಅಷ್ಟು ಹಿಂದೆಯೇ ಅವರು ಎತ್ತಿತೋರಿಸಿದ ಅಪಮೌಲ್ಯಗಳು ಇನ್ನಷ್ಟು ಬೆಳೆಯುತ್ತಲೇ ಹೋಗುತ್ತಿರುವುದನ್ನು ಇಂದು ಬದುಕಿರುವ ನಾವು ಸಹ ಕಾಣುವಂತಾಗಿದೆ. ಇಂಥ ಅಮೂಲ್ಯ ಕೃತಿಗಳು ನಮ್ಮ ಕಣ್ಣನ್ನು ತೆರೆಯುವಂತಾಗಲಿ ತನ್ಮೂಲಕ ಸಮಾಜ ಹಿತದ ಕಾಳಜಿ ನಮ್ಮೆಲ್ಲರ ಗುರಿಯಾಗಲಿ ಎಂಬುದೇ ನನ್ನ ಆಶಯ.
ಬಿ. ಮಾಲಿನಿ ಮಲ್ಯ
|
ಕೋಟ ಶಿವರಾಮ ಕಾರಂತ(1902-1997) ಕನ್ನಡದ ಬಹುಮುಕ ಪ್ರತಿಭೆ. ಅವರು ಕಾದಂಬರಿಕಾರರು, ಸಮಾಜ ಚಿಂತಕರು, ಪರಿಸರವಾದಿಗಳು, ಯಕ್ಷಗಾನ ತಜ್ಞರು, ಚಿತ್ರನಿರ್ದೇಶಕರು ಹಾಗೂ ಚಿಂತಕರೆಂದು ಹೆಸರಾಗಿದ್ದವರು. ಶಿವರಾಮಕಾರಂತರು ಕಾದಂಬರಿಕಾರರೆಂದು ಪ್ರಸಿದ್ಧರಾಗಿದ್ದರೂ, ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಕೆಲಸ ಮಾಡಿದವರು. ಅವುಗಳಲ್ಲಿ ವಿಜ್ಞಾನ ಸಾಹಿತ್ಯ ಮತ್ತು ಮಕ್ಕಳ ಸಾಹಿತ್ಯ ಪ್ರಮುಕವಾದವು. ಇತಿಹಾಸಕಾರ ರಾಮಚಂದ್ರ ಗುಹ ಅವರು ಕಾರಂತರನ್ನು ‘ಸ್ವಾತಂತ್ರ್ಯೋತ್ತರ ಭಾರತದ ರವೀಂದ್ರನಾಥ್ ಠಾಕೂರ್‘ ಎಂದು ಕರೆದರು. ಆ ಮಾತಿನಲ್ಲಿ ಅತಿಶಯೋಕ್ತಿಯಿಲ್ಲ.
ಕಾರಂತರ ‘ಮರಳಿ ಮಣ್ಣಿಗೆ“ ಮೂರು ತಲೆಮಾರುಗಳ ಕತೆಯ ಕನ್ನಡದ ಪ್ರಮುಕ ಹಾಗೂ ಬಹು ಚರ್ಚಿತ ಕಾದಂಬರಿ. ಜ್ಞಾನಪೀಠ ಪ್ರಶಸ್ತಿಯು ‘ಮೂಕಜ್ಜಿಯ ಕನಸುಗಳು‘ ಕೃತಿಯ ಬದಲು “ಮರಳಿ ಮಣ್ಣಿಗೆ“ ಬರಬೇಕಿತ್ತು ಎನ್ನುವುದು ಅನೇಕರ ವಾದ. ಇತ್ತೀಚಿನ ದಿನಗಳಲ್ಲಿ ‘ಮೂಕಜ್ಜಿಯ ಕನಸುಗಳು‘ ಕೃತಿಯ ವಿಶಿಷ್ಟತೆಯನ್ನು ವಿಮರ್ಶಕರು ಮನಗಂಡಿರುವರು. ‘ಚೋಮನ ದುಡಿ‘ ಹಾಗೂ ‘ಅಳಿದ ಮೇಲೆ‘ ಕಾರಂತರ ಬಹು ಚರ್ಚಿತ ಇತರ ಕಾದಂಬರಿಗಳು. ಕನ್ನಡ ಸಾಹಿತ್ಯಕ್ಕೆ ಸದಾ ಪ್ರಸ್ತುತವಾಗುವರು.
|
|
| |
|
|
|
|
|
|
|
|
|